ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಚಿಕ್ಕನಾಯಕನಹಳ್ಳಿ ಪಟ್ಟಣದ ಜಿ.ಎಚ್.ಎಸ್.ನಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್ ಬಿ.ಜೆ(16) ತೀವ್ರ ಹೃದಯಾಘಾತ ದಿಂದ ಮೃತ ಪಟ್ಟಿದ್ದಾರೆ. ತಾಲೂಕಿನ ಭೈರಾಪುರದ ಜಯರಾಂ ಎಂಬುವರ ಮಗ ರಾಹುಲ್, ಶುಕ್ರವಾರ ಶಾಲೆಗೆ ಹೋಗಿ ಬಂದ ನಂತರ ಮನೆಯಲ್ಲಿ ರಾತ್ರಿ 9.30ರಲ್ಲಿ ಓದುತ್ತಿರುವಾಗ ತೀವ್ರ ಎದೆ ನೋವು ಕಾಣಿಸಿಕೊಂಡದೆ ತಕ್ಷಣ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಕಾರಿಯಾಗದೆ, ರಾತ್ರಿ 10 ಸುಮಾರಿನಲ್ಲಿ ಹುಳಿಯಾರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ, ಮೃತರ ಗೌರವಾರ್ಥ ಶಾಲೆಯಲ್ಲಿ ಶ್ರದ್ದಾಂಜಲಿ ಸಲ್ಲಿಸಿದ್ದಾರೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು, ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿದ್ದಾರೆ. ಶಾಸಕ ಸಿ.ಬಿ.ಸುರೇಶ್ ಬಾಬು ಕಂಬನಿ ಮಿಡಿದಿದ್ದಾರೆ.

136

© ಹುಳಿಯಾರು ಸಮಗ್ರ ಸುದ್ಧಿ . All Rights Reserved.