ವಿದ್ಯಾರ್ಥಿಗಳಿಗೆ ಲಾಪ್ ಟಾಪ್ ವಿತರಣೆ

ತುಮಕೂರು : 2024- 5ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕ ಆರ್ಯವೈಶ್ಯ ಮಹಾಸಭಾ ವಿದ್ಯಾರ್ಥಿ ಮಿತ್ರ ಯೋಜನೆಯಡಿಯಲ್ಲಿ ನೀಡುತ್ತಿದ್ದ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯಲ್ಲಿ 22 ಆಯ್ದ ವಿದ್ಯಾರ್ಥಿಗಳಿಗೆ ಮಂಜೂರು ಮಾಡಿದ್ದು ಅದರಲ್ಲಿ ಹದಿನೈದು ವಿದ್ಯಾರ್ತಿಗಳಿಗೆ ಮಹಾಸಭಾ ಕಾರ್ಯಾಲಯದಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ನೀಡಲಾಗಿತ್ತು. ಉಳಿದ ಏಳು ವಿದ್ಯಾರ್ಥಿಗಳಿಗೆ ಮಂಗಳವಾರದಂದು ತುಮಕೂರಿನ ಎಸ್ . ಎಸ್ ಪುರಂ ನಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ವಿತರಿಸಲಾಯಿತು.
ತುಮಕೂರು ಜಿಲ್ಲಾ ಅಧ್ಯಕ್ಷ ಎಲ್. ಆರ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಆರ್ಯವೈಶ್ಯ ಮಂಡಳಿಯ ಅಧ್ಯಕ್ಷರಾದ ಆರ್. ಎಲ್. ರಮೇಶ್ ಬಾಬು ಮುಖ್ಯ ಅತಿಥಿಗಳಾಗಿ ಆಗಮಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಹಿತವಚನ ಹೇಳಿದರು. ರಾಜ್ಯ ಕಾರ್ಯಕಾರಿ ಸದಸ್ಯರಾದ ಮೋಹನ್ ರವರು ಮತ್ತು ತುಮಕೂರು ಜಿಲ್ಲಾ ಸಮಿತಿಯ ಸದಸ್ಯರಾದ ಡಾ. ವಿವೇಕಾನಂದ ಶ್ರೇಷ್ಠಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

185

© ಹುಳಿಯಾರು ಸಮಗ್ರ ಸುದ್ಧಿ . All Rights Reserved.