ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ವಿಧಾನ ಸಭಾಕ್ಷೇತ್ರಕ್ಕೆ ನಮ್ಮ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮರಸ್ವಾಮಿ ಬೇಟಿ ನೀಡಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಇವರ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪಟ್ಟಣದ ಗೃಹ ಕಚೇರಿಯಲ್ಲಿ ಕ್ಷೇತ್ರದ ಜೆಡಿಎಸ್ ಕೋರ್ ಕಮಿಟಿ, ಬೂತ್ ಕಮಿಟಿ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ,ಗ್ರಾಮ ಪಂಚಾಯಿತಿ, ಪುರಸಭೆಯ ಚುನಾವಣೆಗಳಲ್ಲಿ ಯಾವರೀತಿಯಲ್ಲಿ ಪಕ್ಷ ಸಂಘಟನೆ ಕುರಿತಂತೆ ನಮ್ಮ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನು ಜೂನ್ 17 ರಂದು ಬುಕ್ಕಾಪಟ್ಟಣದಲ್ಲಿ ಏರ್ಪಡಿಸಲಾಗಿದ್ದು ಈ ಸಭೆಗೆ ನಮ್ಮ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಮಿಸಲಿದ್ದು ಅಂದು ಎಲ್ಲಾ ನಮ್ಮ ಕಾರ್ಯಕರ್ತರು ಸಭೆಗೆ ಹಾಜರಾಗುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ನ ಕಾರ್ಯದ್ಯಕ್ಷ ಹೆಚ್.ಆರ್.ಶಶಿಧರ್ಮಾ ತನಾಡಿ ಮುಂಬರಲಿರುವ ಚುನಾವಣೆಗಳು ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಗಳಾಗಿವೆ ಅದ್ದರಿಂದ ಈ ಚುನಾವಣೆಗಳಲ್ಲಿ ನಮ್ಮ ಪಕ್ಷವನ್ನು ಸಂಘಟಿಸುವಲ್ಲಿ ಎಲ್ಲಾ ಕಾರ್ಯಕರ್ತರು ಸಂಘಟಿತರಾಗಬೇಕೆಂದರು.
ಸಭೆಯಲ್ಲಿ ತಾಲ್ಲೂಕು ಜೆಡಿಎಸ್ ಅದ್ಯಕ್ಷ ರಾಮಚಂದ್ರಯ್ಯ, ಪುರಸಭಾದ್ಯಕ್ಷ ಸಿ.ಹೆಚ್.ದಯಾನಂದ್, ಉಪಾದ್ಯಕ್ಷ ರಾಜಶೇಖರ್, ಸ್ಥಾಯಿ ಸಮಿತಿ ಅದ್ಯಕ್ಷ ಸಿ.ಡಿ.ಸುರೇಶ್, ಪಿಎಲ್ ಡಿ ಬ್ಯಾಂಕ್ ಉಪಾದ್ಯಕ್ಷ ದಬ್ಬಗುಂಟೆ ರವಿಕುಮಾರ್, ಸೇರಿದಂತೆ ಮುಖಂಡರುಗಳಾದ ಕುಮಾರ್, ಸಿ.ಬಿ.ರೇಣುಕಸ್ವಾಮಿ, ತಿಮ್ಮನಹಳ್ಳಿ ಹರ್ಷ ಸೇರಿದಂತೆ ಇತರರು ಇದ್ದರು.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.